Wednesday, 30 October 2019

"ಷೋಡಷೋಪಚಾರ ಪೂಜಾ ವಿಧಾನ

ತುಳಸಿ ಪೂಜೆ ಮಂತ್ರ

"ಷೋಡಷೋಪಚಾರ ಪೂಜಾ ವಿಧಾನ.....

ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ.

ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ "ಷೋಡಶೋಪಚಾರ" ಪೂಜೆ ಬಹಳ ಮುಖ್ಯವಾಗಿದೆ..

ಷೋಡಶೋಪಚಾರ ಮತ್ತು ವಿಶೇಷತೆಗಳು..!

೧. ಆಸನ
೨. ಪಾದ್ಯ
೩. ಅರ್ಘ್ಯ
೪. ಆಚಮನ
೫. ಸ್ನಾನ
೬. ವಸ್ತ್ರ
೭. ಯಜ್ಞೋಪವೀತ
೮. ಗಂಧ
೯. ಅಕ್ಷತೆ
೧೦. ಆಭರಣ
೧೧. ಪುಷ್ಪಮಾಲಿಕೆ
೧೨. ಧೂಪ
೧೩. ದೀಪ
೧೪. ಮಧುಪರ್ಕ
೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..
"ಉಪ" ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..
"ದೇವರಿಗೆ ಹತ್ತಿರವಾಗುವುದು ಎಂದರ್ಥ..!

೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..

೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..

೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..

೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..

೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..! ದೇವರ ತಲೆಮೇಲೆ ಅಭಿಷೇಕ ವನ್ನು ಹಾಕುವದು ಅದಕ್ಕೆ ಮಲಾಪಕರ್ಷ ‍ಸ್ನಾನ ಅಂತೇವೆ  ನಂತರ   ವಿಶೇಷ ಪೂಜೆ ಇದ್ದರೆ ಪಂಚಾಮೃತ ಅಭಿಷೇಕ ಮಾಡಿ  ನಂತರ   ರುದ್ರಾಭಿಷೇಕ  , ಶ್ರೀಸೂಕ್ತ , ಪುರುಷ ಸೂಕ್ತ  , ನಾರಾಯಣ ಸೂಕ್ತ , ದುರ್ಗಾ ಸೂಕ್ತ  ಅದು ನಿಮ್ಮ ಕುಲಧರ್ಮ ಅನುಗುಣವಾಗಿ ಅಭಿಷೇಕ  ಮಾಡಿ 

೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು.. ಇಲ್ಲಿ ಗೆಜ್ಜೆವಸ್ತ್ರ ವನ್ನು ಏರಿಸುವದು...

೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ.. ಅಕ್ಷತೆ ಹಾಕಿದರೂ ನಡೆಯುತ್ತೆ...
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)

೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..

೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..

೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..

೧೧. ಪುಷ್ಪಮಾಲಿಕೆ... ದೇವರಿಗೆ ನಾನಾ ಪುಷ್ಪಗಳಿಂದ ಅಲಂಕಾರ  ಜೊತೆಗೆ  ಯಾವ ದೇವರ ಆರಾಧನೆ ಇರುತ್ತೊ ಆ ದೇವರಿಗೆ ಸಹಸ್ರ ನಾಮ ಅಥವಾ ಅಷ್ಟೋತ್ತರ ಹೇಳುತ್ತಾ ಹೂ ತುಳಸಿ ಏರಿಸಬೇಕು

೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..

೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು - ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..

೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..

೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)
ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
"ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..

ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ಫಲ ಪುಷ್ಪ  ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ
" ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ "ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..!
ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು..
ನಂತರ ನಮಸ್ಕಾರ ಮಾಡಬೇಕು..

16  ಮಂತ್ರ ಪುಷ್ಪ   ಇಲ್ಲಿ ದೇವರಿಗೆ ಮಂತ್ರ ಪುಷ್ಪ ಹೇಳಿ ಅಕ್ಷತೆಯನ್ನು  ಹಾಕಿ ಪ್ರದಕ್ಷಣೆ ನಮಸ್ಕಾರ ಹಾಕಿ  ಪ್ರಾರ್ಥನೆ ರೂಪವಾಗಿ ದೇವರಿಗೆ ಶ್ಲೋಕ  ,ಹಾಡು   ನಂತರ ಪೂಜಾ ಸಮರ್ಪಣೆ.....  ನಂತರ ಎರಡು ಸಲ ಆಚಮನೆ ಮಾಡಿದರೆ   ಷೋಡಷೋಪಚಾರ ಪೂಜೆ ಮುಗಿತು 

🕉 ಶ್ರೀ ತುಳಸಿ ಪೂಜೆಯನ್ನು ಮದುವೆಯಾದ ಸ್ತ್ರೀಯರು, ಸುಮಂಗಲಿಯರು, ಹೆಣ್ಣು ಮಕ್ಕಳು ಎಲ್ಲರೂ ಪ್ರತಿದಿನ ಅರಷಿನಾದಿ ಮಂಗಳದ್ರವ್ಯಗಳಿಂದ ಸ್ನಾನ ಮಾಡಿ ಶುಭ್ರರಾಗಿ ಕುಂಕುಮಾದಿಗಳನ್ನು ಧರಿಸಿ ಪ್ರತಿದಿನ ತಪ್ಪದೇ ಶ್ರೀ ತುಳಸಿ ಪೂಜೆ ಮಾಡಬೇಕು.

ಶ್ರೀ ತುಳಸಿ ವೃಂದಾವನದ ಸುತ್ತಲೂ ಚೆನ್ನಾಗಿ ಗೋಮಯದಿಂದ ಸಾರಿಸಿ ರಂಗೋಲಿ ಹಾಕಿ.

*|| ಶ್ರೀಯಃ ಪ್ರಿಯೇ ಶ್ರಿಯಾವಾಸೇ ನಿತ್ಯಂ ಶ್ರೀಧರವಲ್ಲಭೇ ||*

*|| ಭಕ್ತ್ಯಾ ದತ್ತಂ ಮಯಾರ್ಘ್ಯಂ ಹಿ ತುಳಸಿ ಪ್ರತಿಗ್ರಹ್ಯತಾಮ್ ||*

ಮೇಲಿನ ಮಂತ್ರ ಹೇಳುತ್ತಾ ತುಳಸಿಗೆ ಅಭಿಷೇಕ ಮಾಡಿ.

ನಂತರ ಅರಶಿನ ಕುಂಕುಮ ಹೂವುಗಳಿಂದ ಪೂಜೆ ಮಾಡಿ.

*|| ಯನ್ಮೂಲೇ ಸರ್ವತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ ಯದಗ್ರೇ*

  *ಸರ್ವವೇದಾಸ್ಚ ತುಳಸೀ ತ್ವಾಂ ನಮಾಮ್ಯಹಂ ||*

*|| ತುಳಸಿ ಶ್ರೀಸಖಿ ಶುಭೆ ಪಾಪಹಾರಿಣಿ ಪುಣ್ಯದೇ||*

*|| ನಮಸ್ತೇ ನಾರದನುತೇ ನಾರಾಯಣಮನಃ ಪ್ರಿಯೇ ||*

ಮೇಲಿನ ಮಂತ್ರ ಹೇಳಿ ನಮಸ್ಕರಿಸಿ.

ಶ್ರೀ ತುಳಸಿ ಪ್ರಾರ್ಥನೆ

*ನಮಸ್ತುಳಸಿ ಕಲ್ಯಾಣಿ ನಮೋ ವಿಷ್ಣು ಪ್ರಿಯೇ ಶುಭೆ |*

*ನಮೋ ಮೋಕ್ಷ ಪ್ರದಾಯಿಕೆ ದೇವೀ ನಮಃ ಸಂಪತ್ಪ್ರದಾಯಿಕೆ ||*

ಶ್ರೀ ತುಳಸಿ ಧ್ಯಾನ

*ಧ್ಯಾಯೇಸ್ಚ ತುಳಸಿಂ ದೇವೀಂ ಶ್ಯಾಮಂ ಕಮಲ ಲೋಚನಮ್ |*

*ಪ್ರಸನ್ನಂ ಪದ್ಮಕಲ್ಹಾರ ವರದಾಭಯ ಚತುರ್ಭುಜಮ್ ||*

ಕಿರೀಟ ಹಾರ ಕೇಯೂರ ಕುಂಡಲಾದಿ ವಿಭೂಶಿತಾಮ್ |

*ಧವಲಾಂಕುಶ ಸಂಯುಕ್ತಾಂ ನಿಶಿದುಶೀಮ್ ||*

ಶ್ರೀ ತುಳಸಿ ಪ್ರಣಾಮ

*ವೃಂದಾಯೈ ತುಳಸಿ ದೇವ್ಯೈ*

*ಪ್ರಿಯಾಯೈ ಕೇಶವಸ್ಯ ಚ*

*ಕೃಷ್ಣ ಭಕ್ತಿ ಪರದೆ ದೇವಿ*

*ಸತ್ಯವತ್ಯೈ ನಮೋ ನಮಃ*

ಶ್ರೀ ತುಳಸಿ ಪ್ರದಕ್ಷಿಣ ಮಂತ್ರ

*ಯಾನಿ ಕಾನಿ ಚಪಾಪಾನಿ*

*ಬ್ರಹ್ಮ ಹತ್ಯಾದಿಕಾನಿ ಚ*

*ತಾನಿ ತಾನಿ ಪ್ರನಶ್ಯಂತಿ*

*ಪ್ರದಕ್ಷಿಣಃ ಪದೇ ಪದೇ*

ಶ್ರೀ ತುಳಸಿ ನಮಸ್ಕಾರ  

*ಯನ್ಮೂಲೇ ಸರ್ವ ತೀರ್ಥಾನಿ ಯನ್ಮಧ್ಯೆ ಸರ್ವದೇವತಾಃ |*
*ಯದಗ್ರೇ ಸರ್ವವೇದಾಸ್ಚ ತುಳಸಿ ತ್ವಾಂ ನಮಾಮ್ಯಹಂ ||*

*ಪ್ರಸೀದ ತುಳಸೀ ದೇವಿ ಪ್ರಸೀದ ಹರಿವಲ್ಲಭೇ |*
*ಕ್ಷೀರೋದ ಮಥನೊದ್ಭೋತೇ ತುಳಸಿ ತ್ವಾಂ ನಮಾಮ್ಯಹಂ ||*

ಅಷ್ಟ ನಾಮ ಸ್ತವ (ಪದ್ಮ ಪುರಾಣದಿಂದ)

*|| ವೃಂದಾವನಿ, ವೃಂದ, ವಿಶ್ವಪೂಜಿತಾ, ಪುಷ್ಪಸಾರ, ನಂದಿನಿ, ಕೃಷ್ಣ ಜೀವನಿ, ವಿಶ್ವ ಪಾವನಿ, ತುಳಸಿ ||*

ಶ್ರೀ ತುಳಸಿ ಪೂಜೆ ಮಾಡುವಾಗ ಶ್ರೀ ತುಳಸಿ ದೇವಿಯ ಈ ಎಂಟು ನಾಮಗಳನ್ನು ಹೇಳಿದರೆ ಅಶ್ವಮೇಧದ ಫಲ ಬರುತ್ತದೆ. ಶ್ರೀ ತುಳಸಿ ದೇವಿಯ ಜನ್ಮದಿನವಾದ ಹುಣ್ಣಿಮೆಯಂದು ಈ ಎಂಟು ನಾಮಗಳಿಂದ ಪೂಜಿಸಿದರೆ ಜೀವನ್ಮ್ರುತ್ಯು ಮತ್ತು ಎಲ್ಲಾ ಬಂಧನಗಳಿಂದ ಮುಕ್ತರಾಗಿ ವೃಂದಾವನ ಸೇರುತ್ತಾರೆ. ಈ ಹೆಸರುಗಳನ್ನು ಹೇಳುವುದರಿಂದ ಕೃಷ್ಣನ ಕ್ರಪೆಗೆ ಪಾತ್ರರಾಗುತ್ತಾರೆ.

ಸಮಯಾವಕಾಶ ಇರುವವರು ಶ್ರೀ ತುಳಸಿ ಅಷ್ಟೋತ್ತರ ಶತನಾಮಾವಳಿಯನ್ನು ಹೇಳಿದರೆ ಉತ್ತಮ.

ಸರ್ವಜನ ಸುಖಿನೋಭವಂತು
ಶ್ರೀ ಕೃಷ್ಣಾರ್ಪಣಮಸ್ತು.

No comments:

Post a Comment