Wednesday, 30 October 2019

ಸ್ತ್ರೀ-ಪುರುಷರು ಕುಂಕುಮ ಏಕೆ ಮತ್ತು ಹೇಗೆ ಹಚ್ಚಬೇಕು

ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು ?

ಸ್ತ್ರೀ-ಪುರುಷರು ಕುಂಕುಮ ಏಕೆ ಮತ್ತು ಹೇಗೆ ಹಚ್ಚಬೇಕು?

ಶಾಸ್ತ್ರ :

ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಬ್ರಹ್ಮಾಂಡದಲ್ಲಿನ ಚೈತನ್ಯವು ಆಕರ್ಷಿತವಾಗುತ್ತದೆ ಮತ್ತು ಕಡಿಮೆ ಸಮಯದಲ್ಲಿ ವ್ಯಕ್ತಿಯ ಭಾವಜಾಗೃತಿಯಾಗುತ್ತದೆ. ಕುಂಕುಮದಿಂದ ಕೆಟ್ಟ ಶಕ್ತಿಗಳಿಂದ ರಕ್ಷಣೆಯಾಗುತ್ತದೆ. ಆದುದರಿಂದ ಸ್ತ್ರೀಯರು ಬಿಂದಿಗಿಂತ ಕುಂಕುಮವನ್ನು ಹಚ್ಚಿಕೊಳ್ಳಬೇಕು.

ಪದ್ಧತಿ : ಪುರುಷರು ತಮ್ಮ ಮತ್ತು ಇತರರ ಭ್ರೂಮಧ್ಯದಲ್ಲಿ ಮಧ್ಯದ ಬೆರಳಿನಿಂದ ಕುಂಕುಮದ ಉದ್ದ ತಿಲಕವನ್ನು ಹಚ್ಚಬೇಕು. ಸ್ತ್ರೀಯರು ತಮಗೆ ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳು) ಮತ್ತು ಇತರ ಸ್ತ್ರೀಯರ ಭ್ರೂಮಧ್ಯದಲ್ಲಿ ಮಧ್ಯದ ಬೆರಳಿನಿಂದ ಗೋಲಾಕಾರದ ಕುಂಕುಮವನ್ನು ಹಚ್ಚಬೇಕು.

ಇತರರಿಗೆ ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು?

ಪುರುಷರಿರಲಿ ಅಥವಾ ಸ್ತ್ರೀಯರಿರಲಿ ಅವರು ಇತರರಿಗೆ ಕುಂಕಮವನ್ನು ಹಚ್ಚುವಾಗ ಮಧ್ಯಮಾವನ್ನು (ಮಧ್ಯದ ಬೆರಳು) ಉಪಯೋಗಿಸಬೇಕು, ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅವರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿರುತ್ತದೆ. ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು.

ಕುಂಕುಮಾರ್ಚನೆ

    ದೇವಿಯ ಉಪಾಸನೆಯಲ್ಲಿ ಕುಂಕುಮಾರ್ಚನೆಗೆ ಮಹತ್ವಪೂರ್ಣ ಸ್ಥಾನವಿದೆ. ಅನೇಕ ಸ್ಥಳಗಳಲ್ಲಿ ನವರಾತ್ರಿಯಲ್ಲಿಯೂ ವಿಶೇಷ ರೂಪದಲ್ಲಿ ಈ ವಿಧಿಯನ್ನು ಮಾಡಲಾಗುತ್ತದೆ. ದೇವಿ ಸಹಸ್ರನಾಮದಲ್ಲಿ ದೇವಿಯ ಒಂದೊಂದು ಹೆಸರನ್ನು ಹೇಳುತ್ತಾ ಅಥವಾ ದೇವಿಯ ನಾಮಜಪ ಮಾಡುತ್ತಾ ಒಂದು ಚಿಟಿಕೆ ಕುಂಕುಮವನ್ನು ಅರ್ಪಿಸುವ ಕೃತಿಗೆ 'ಕುಂಕುಮಾರ್ಚನೆ' ಎನ್ನುತ್ತಾರೆ.

    ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ.

    ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.

    ದೇವಿಯ ಚರಣಗಳಿಂದ ಆರಂಭಿಸಿ ಶಿರದವರೆಗೆ ಏರಿಸಿ, ಅವರನ್ನು ಕುಂಕುಮದಿಂದ ಆಚ್ಛಾದಿಸುತ್ತಾರೆ.
    ಕುಂಕುಮಾರ್ಚನೆಯು ಪೂರ್ಣವಾದ ನಂತರ ದೇವಿಗೆ ಆರತಿಯನ್ನು ಬೆಳಗುತ್ತಾರೆ. ಎಲ್ಲರ ಕಲ್ಯಾಣಕ್ಕಾಗಿ ಪ್ರಾರ್ಥನೆಯನ್ನು ಮಾಡುತ್ತಾರೆ.

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು

No comments:

Post a Comment