ಹಿಂದೂಗಳ ಮನೆಯಂಗಳದಲ್ಲಿ ತುಳಸಿ ವೃಂದಾವನ ಏಕಿರಬೇಕು?
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕ ಪ್ರಕಾರವಾಗಿ ಅಲಂಕರಿಸುತ್ತದೆ.
ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ತುಳಸಿ ಕಾನನಂ ಯತ್ರ ಯತ್ರ ಪದ್ಮವ ನಾನಿಚ|
ವಸಂತಿ ವೈಷ್ಣ ವಾಯತ್ರ ತತ್ರ ಸನ್ನಿಹಿತೋ ಹರಿ:||
ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದುಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ.
ತುಳಸಿಯ ಸೃಷ್ಟಿ :--
ದೇವ-ದಾನವರು ಕ್ಷೀರ ಸಮುದ್ರವನ್ನು ಮಥಿಸಿದಾಗ ಹಲವು ವಸ್ತು ವಿಶೇಷಗಳ ಜೊತೆಗೆ ಅಮೃತವೂ ಉದಯಿಸಿತು. ಅದನ್ನು ಪಡೆಯಲೋಸುಗ ದೇವದಾನವರ ಮಧ್ಯೆ ಉಂಟಾದ ತುಮುಲದಲ್ಲಿ ಅಮೃತದ ಕೆಲವು ಬಿಂದುಗಳು ಭೂಮಿಯ ಮೇಲೆ ಬಿದ್ದುದು.
ಆ ಸ್ಥಳಗಳಲ್ಲಿ ತುಳಸಿ ಸಸ್ಯಗಳಾಗಿ ಅವು ಬೆಳೆದವು. ಇನ್ನೂ ಕೆಲವರು ಹೇಳುವಂತೆ ಸಮುದ್ರ ಮಥನ ಕಾಲದಲ್ಲಿ ಅಮೃತವು ಉದಯಿಸಿದಾಗ ಶ್ರೀ ವಿಷ್ಣುವಿನ ನೇತ್ರಗಳಿಂದ ಆನಂದಾಶ್ರುಗಳು ಅದರಲ್ಲಿ ಬಿದ್ದಾಗ ತುಳಸಿಯ ಉತ್ಪತ್ತಿ(ಸೃಷ್ಟಿ)ಯಾಯಿತು.
ಅದರಿಂದಾಗಿ ತುಳಸಿಯು ಹಿಂದೂಗಳಿಗೆ ಪೂಜನೀಯ ವಾಯಿತು. ತಾನು ಬೇರೆ ಯಾವುದರ ತುಲನೆಗೂ ಸರಿ ಸಾಟಿಯಾಗದಿದ್ದುದರಿಂದ ಅದಕ್ಕೆ ತುಳಸಿ ಎಂಬ ಹೆಸರು ಅರ್ಥಪೂರ್ಣವಾಯಿತು.
ತುಳಸಿಯಿಂದಾಗುವ ಆಧ್ಯಾತ್ಮಿಕ ಮತ್ತು ಶಾರೀರಿಕ ಲಾಭಗಳು :---
ತುಳಸಿಯಲ್ಲಿ ರಾಮ ತುಳಸಿ, ಕೃಷ್ಣ ತುಳಸಿ ಹಾಗೂ ರಾಜ ತುಳಸಿ ಎಂಬ ಅನೇಕ ಪ್ರಭೇದಗಳಿವೆ. ರಾಮ ತುಳಸಿಯ ಬಣ್ಣವು ಬಿಳಿ, ಕೃಷ್ಣ ತುಳಸಿಯು ಸ್ವಲ್ಪ ಕಪ್ಪು. ರಾಮ ತುಳಸಿಯಿಂದ ಶ್ರೀರಾಮನ ತಾರಕ ತತ್ತ್ವದ ಪ್ರಕ್ಷೇಪಣೆಯಾಗುತ್ತದೆ.
ಕೃಷ್ಣ ತುಳಸಿಯಿಂದ ಅನಿಷ್ಟ ಶಕ್ತಿಗಳ ನಾಶಕ್ಕೆ ಪೂರಕ ವಾದ ಶ್ರೀಕೃಷ್ಣನ ಮಾರಕ ತತ್ತ್ವದ ಪ್ರಕ್ಷೇಪಣೆ ಯಾಗುತ್ತದೆ.
ಅಶ್ವತ್ಥವೃಕ್ಷದಂತೆ ತುಳಸಿಯಿಂದಲೂ ಮಾನವನಿಗೆ ಪ್ರಾಣಶಕ್ತಿಯು (ಆಮ್ಲಜನಕವು) ಹೇರಳವಾಗಿ ದೊರೆಯುವುದರಿಂದ ತುಳಸಿಗೆ ಪ್ರದಕ್ಷಿಣೆಗಳನ್ನು ಹಾಕುವುದು ಲಾಭದಾಯಕವಾಗಿದೆ.
ತುಳಸಿಯ ಕಷಾಯವು ಕೆಮ್ಮು, ನೆಗಡಿ, ಶೀತ, ಶ್ಲೇಷ್ಮಾದಿಗಳ ನಿವಾರಕವಾಗಿದೆ. ವೃಂದಾವನದಲ್ಲಿ ಉದುರಿದ ಎಲೆಗಳಿಂದ ಮಣ್ಣುಗೂಡಿದ ಅದರ ಮೃತ್ತಿಕೆಯನ್ನು ಶರೀರದಲ್ಲಿ ಕುಷ್ಠಾದಿ ಚರ್ಮರೋಗ ಗಳಿದ್ದಲ್ಲಿಗೆ ಹಚ್ಚಿಕೊಂಡರೆ ರೋಗನಿವಾರಣೆ ಯಾಗುವುದೆಂದು ಹೇಳಲಾಗಿದೆ.
ತುಳಸಿಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಉರಿಸಿಡಬೇಕು? ಏಕೆ?
ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀ ಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗ ತೊಡಗುತ್ತದೆ.
ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ.
ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು,
ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇತ್ಯಾದಿಗಳನ್ನೂ ಮಾಡುವುದು ಅಗತ್ಯವಾಗಿದೆ.
ಗೃಹಿಣಿಯರು ಸಂಜೆಯ ಹೊತ್ತು ಶುಚಿರ್ಭೂತರಾಗಿ ಸೂರ್ಯಾಸ್ತದ ಸಮಯಕ್ಕೆ ಸರಿಯಾಗಿ ತುಳಸಿ ಕಟ್ಟೆಯಲ್ಲಿ ತುಳಸಿಯ ಕಡೆಗೆ ದೀಪ ಜ್ವಾಲೆಯು ಮುಖಮಾಡಿರುವಂತೆ ತುಪ್ಪದ ಯಾ ಎಳ್ಳೆಣ್ಣೆಯ ದೀಪವನ್ನು ಸಾತ್ವಿಕ ಊದುಬತ್ತಿಯನ್ನು ಉರಿಸಿಟ್ಟು ತುಳಸಿಗೆ ಪ್ರದಕ್ಷಿಣೆ ಗೈದು ನಮಸ್ಕರಿಸಬೇಕು.
ತುಳಸಿಯ ಸ್ತೋತ್ರವನ್ನೂ ಹೇಳಬಹುದು. ಹೀಗೆ ಮಾಡುವುದರಿಂದ ಆ ದೀಪದ ಬೆಳಕಿನಲ್ಲಿ ತುಳಸಿಯು ಬ್ರಹ್ಮಾಂಡದಿಂದ ಶ್ರೀಕೃಷ್ಣನ ಮಾರಕ ತತ್ತ್ವವನ್ನು ಆಕರ್ಷಿಸಿ ತುಳಸಿಕಟ್ಟೆಯ ಹಾಗೂ ಮನೆಯ ಸುತ್ತಲೂ ಅದನ್ನು ಪ್ರಕ್ಷೇಪಿಸಿ ಕಣ್ಣಿಗೆ ಗೋಚರವಾಗದ ಸೂಕ್ಷ್ಮ ರೂಪದ ಸಂರಕ್ಷಣಾ ಕವಚವನ್ನು ನಿರ್ಮಿಸಿ ಅನಿಷ್ಟ ಶಕ್ತಿಗಳಿಂದ ಜೀವಗಳಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದು.
ದೀಪ ಜ್ಯೋತಿಯ ಸ್ತೋತ್ರ :---
ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಂಪದಃ
ಶತ್ರುಬುದ್ಧಿ ವಿನಾಶಾಯ ದೀಪಜ್ಯೋತಿರ್ನಮೋಸ್ತುತೆ|
ದೀಪಜ್ಯೋತಿಃ ಪರಬ್ರಹ್ಮಾ ದೀಪಜ್ಯೋತಿರ್ಜನಾರ್ದನಃ
ದೀಪೋ ಹರತಿ ಪಾಪಾನಿ ಸಂಧ್ಯಾದೀಪ ನಮೋಸ್ತುತೇ||
ಶ್ರೀ ತುಲಸಿ ಸ್ತೋತ್ರದ ಒಂದು ಶ್ಲೋಕವು ಇಂತಿದೆ:--
ಯನ್ಮೂಲೇ ಸರ್ವ ತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ |
ಯದಗ್ರೇ ಸರ್ವ ವೇದಾಶ್ಚ ತುಲಸಿ ತ್ವಾಂ ನಮಾಮ್ಯಹಮ್||
ಮೇಲಿನ ಈ ಎರಡು ಶ್ಲೋಕಗಳನ್ನು ಅರ್ಥೈಸಿಕೊಂಡರೆ ಮನೆಯ ಅಂಗಳದಲ್ಲಿ ತುಳಸಿ ವೃಂದಾವನ ಹಾಗೂ ಸಂಧ್ಯಾಕಾಲದಲ್ಲಿ ಅದಕ್ಕೆ ದೀಪವನ್ನಿರಿಸುವುದರಿಂದ ಅವುಗಳು ಮನೆ ಮಂದಿಗೂ ಮನೆಗೂ ಸಂರಕ್ಷಕ ದೇವತೆಗಳಂತೆ ಕೆಲಸ ಮಾಡುವುದರ ಮಹತ್ವವು ತಿಳಿಯುತ್ತದೆ.
ಮನೆಯಂಗಳದಲ್ಲಿ ತುಳಸಿ ವೃಂದಾವನವಿರುವುದರ ಅವಶ್ಯಕತೆಯು ಎಷ್ಟಿದೆ ಎಂಬುದರ ಅರಿವಾಗುತ್ತದೆ.
ತುಳಸಿ ಕಟ್ಟೆಯ ನಿರ್ಮಾಣಕ್ಕೆ ಜಾಗ ಗುರುತಿಸುವುದು ಹೇಗೆ?
ನಿಮ್ಮ ಮನೆಯು ಪೂರ್ವಾಭಿಮುಖವಾಗಿದೆ ಯೆಂದಾದರೆ ನೀವು ನಿಮ್ಮ ಮನೆಯಂಗಳದಲ್ಲಿ ಮನೆಯ ಕಡೆಗೆ ಮುಖಮಾಡಿ ನಿಲ್ಲಬೇಕು.
ಮುಖ್ಯದ್ವಾರದಿಂದ ಬಲಗಡೆಗೆ ಅರ್ಧಕೋಲು (ಇನ್ನು ಮುಂದೆ ಒಂದು ಕೋಲು ಅಂದರೆ ೨೮ ಇಂಚು ಎಂದು ತಿಳಿಯಬೇಕು) ದೂರದಲ್ಲಿ ಗೋಡೆಯ ಅಥವಾ ಸಿಟೌಟ್ನ ಗೋಡೆಗೆ ಒಂದು ಗುರುತು ಮಾಡಿರಿ.
ಅಲ್ಲಿಂದ ಪೂರ್ವದಿಕ್ಕಿನೆಡೆಗೆ ಲಂಬವಾಗಿ ನಿಮ್ಮ ಮನೆಯ ಹಾಗೂ ಅಂಗಳದ ಅಗಲವನ್ನು ಅನುಲಕ್ಷ್ಯಿಸಿ ಅದಕ್ಕೆ ಅನುರೂಪವಾಗುವಂತೆ ೩ ಕೋಲು/ ೫ ಕೋಲು/ ೭ ಕೋಲು ದೂರದಲ್ಲಿ ತುಳಸಿಕಟ್ಟೆಯನ್ನು ನಿರ್ಮಿಸಬಹುದು.
ಆಗ ಮನೆ ಬಾಗಿಲಿನಿಂದ ಈಶಾನ್ಯ ದಿಕ್ಕಿನತ್ತ ತುಳಸಿಕಟ್ಟೆ ಯಿರುವುದು. ಮನೆಯು ಪಶ್ಚಿಮಾಭಿಮುಖವಾಗಿ ಇದ್ದರೆ ಯಾ ಉತ್ತರಾಭಿ ಮುಖವಾಗಿದ್ದರೆ ಮನೆಯ ಮುಖ್ಯ ದ್ವಾರದೆದುರು ನಿಂತು ಎಡಗಡೆಗೆ ಅರ್ಧ ಕೋಲು ದೂರದ ಬಿಂದುವಿನಿಂದ ಅನುಕ್ರಮವಾಗಿ (ಪಶ್ಚಿಮಾಭಿಮುಖವಾಗಿ ಯಾ ಉತ್ತರಾಭಿಮುಖವಾಗಿ ೩ ಕೋಲು/ ೫ ಕೋಲು/ ೭ ಕೋಲು ದೂರದಲ್ಲಿ ತುಳಸಿಕಟ್ಟೆಯನ್ನು ನಿರ್ಮಿಸಬಹುದು.
ಅಂದರೆ ಅನುಕ್ರಮವಾಗಿ ಮನೆಯ ಮುಖ್ಯದ್ವಾರದಿಂದ ವಾಯುವ್ಯ ಅಥವಾ ಈಶಾನ್ಯ ದಿಕ್ಕಿಗೆ ತುಳಸಿಕಟ್ಟೆ ಯನ್ನು ನಿರ್ಮಿಸಬಹುದು.
ನಿಮ್ಮ ಮನೆಯ ದಿಕ್ಕು ಸ್ವಲ್ಪ ತಿರುಗಿ ಇದ್ದರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಇದು ಜನ ಸಾಮಾನ್ಯರು ತುಳಸಿಕಟ್ಟೆಯ ನಿರ್ಮಾಣಕ್ಕೆ ಜಾಗ ಗುರುತಿಸ ಬಹುದಾದ ಸುಲಭ ವಿಧಾನವಾಗಿದೆ.
ತುಳಸಿಕಟ್ಟೆಯ ಉದ್ದಗಲ ಅಳತೆಗಳು :--
ಸಾಮಾನ್ಯವಾಗಿ ತುಳಸಿಕಟ್ಟೆಯ ಉದ್ದ, ಅಗಲ, ಎತ್ತರಗಳು ತಲಾ ೧೯ ಅಂಗುಲ (೧೯) ಆಗಿದ್ದರೆ ಉತ್ತಮ.
ತುಳಸಿಕಟ್ಟೆಯ ಎತ್ತರವು ಮನೆಯ ಪಂಚಾಂಗದ ಮಟ್ಟದಿಂದ ಒಂದು ಅಂಗುಲವಾದರೂ ಕಡಿಮೆಯಿರಬೇಕು. ಕೊನೆಯ ಪಕ್ಷ ಪಂಚಾಂಗದ ಮಟ್ಟಕ್ಕೆ ಸಮಾನಾಂತರವಾಗಿರಬಹುದು.
ಅದಕ್ಕಿಂತ ಹೆಚ್ಚು ಎತ್ತರವು ಸೂಕ್ತವಲ್ಲ. ಹಾಗೆಂದು ಈಗಾಗಲೇ ಇರುವ ತುಳಸಿಕಟ್ಟೆಯನ್ನು ಹಾಗೆಯೇ ಇರಗೊಡಿಸುವುದು ಒಳ್ಳೆಯದು.
ಯಾವ ದಿನಗಳಂದು ತುಳಸಿ ಗಿಡವನ್ನು ನೆಡಬಹುದು?
ಸಾಮಾನ್ಯವಾಗಿ ಶನಿವಾರ, ಬುಧವಾರ ಯಾ ಗುರುವಾರ ದಿನಗಳಂದು ಬೆಳಗ್ಗಿನ ಹೊತ್ತು ಶ್ರೀ ಮಹಾ ವಿಷ್ಣುವಿಗೆ ಪ್ರಾರ್ಥನೆ ಮಾಡಿ ತುಳಸಿ ಗಿಡವನ್ನು ನೆಟ್ಟು ರಕ್ಷಿಸಿಕೊಳ್ಳಬಹುದು.
ತುಳಸಿಕಟ್ಟೆಯಲ್ಲಿ ಯಾವ ಜಾತಿಯ ಗಿಡವನ್ನು ನೆಡಬಹುದು?
ತುಳಸಿಕಟ್ಟೆಯಲ್ಲಿ ತಾರಕತತ್ತ್ವವನ್ನು ಆಕರ್ಷಿಸಿ ಪ್ರಕ್ಷೇಪಿಸುವ ಶ್ರೀರಾಮ ತುಳಸಿ (ಬಿಳಿ ತುಳಸಿ)ಯನ್ನು ಸುತ್ತಮುತ್ತ ಮಾರಕ ಆಕರ್ಷಿಸಿ ಪ್ರಕ್ಷೇಪಿಸುವ ಶ್ರೀಕೃಷ್ಣ ತುಳಸಿ (ನಸುಗಪ್ಪು ಬಣ್ಣದ ತುಳಸಿ)ಯನ್ನೂ ನೆಟ್ಟು ಪೋಷಿಸಿದರೆ ಮನೆಯವರಿಗೆ ಈ ಎರಡೂ ತತ್ತ್ವಗಳ ಲಾಭವಾಗುವುದು.
ಅನ್ಯ ವಸ್ತು ವಿಶೇಷಗಳೊಂದಿಗೆ ತುಲನೆಯೇ ಮಾಡಲಾಗದ ತುಳಸಿಯ ಬಗೆಗಿನ ಮಹತ್ವದ ಸಂಗತಿಗಳು ಇನ್ನೂ ಬಹಳವಿದೆ.
ಮುಂಬರುವ ಉತ್ಥಾನ ದ್ವಾದಶಿಯಂದು ಹಾಗೂ ಮುಂದಿನ ವರ್ಷಗಳಲ್ಲಿ ಶ್ರೀ ತುಳಸಿಪೂಜೆಯನ್ನು ಶ್ರೀಕೃಷ್ಣ ದಾಮೋದರನೊಂದಿಗೆ ವಿವಾಹ ಮಾಡುವ ಮೂಲಕ ಅತ್ಯಂತ ಶ್ರದ್ದಾ ಭಕ್ತಿಭಾವಗಳಿಂದ ಆಚರಿಸಿ ದೈವಾನುಗ್ರಹ ಪಡೆಯೋಣ.
ಆದಿನ ಅನಿವಾರ್ಯವಾಗಿ ಪೂಜೆಮಾಡಲಾಗದಿದ್ದರೆ ಅನಂತರದ ಹುಣ್ಣಿಮೆಯ ತನಕ ಯಾವುದಾದರೊಂದು ದಿನ ಪೂಜೆ ಮಾಡಬಹುದು.
ತುಳಸಿಪೂಜೆಯ ಸಂದರ್ಭದಲ್ಲಿ ತಮೋ ಗುಣಿಯಾದ ಮೇಣದ ಬತ್ತಿಗಳನ್ನು ಉರಿಸಿಡದೆ ಸತ್ತ್ವಗುಣೀ ಎಳ್ಳೆಣ್ಣೆಯ ಹಣತೆಗಳನ್ನು ದೇದೀಪ್ಯ ವಾತಾವರಣ ವನ್ನು ನಿರ್ಮಿಸಿ ಸತ್ತ್ವಗುಣದ ಸಂವರ್ಧನೆ ಮಾಡುವುದು ತೀರಾ ಅವಶ್ಯವಾಗಿದೆ ಎಂಬುದರ ಅರಿವು ನಮಗೆಲ್ಲರಿಗೂ ಇರಲಿ.ಹಿಂದೂಗಳ ಮನೆಯಂಗಳದಲ್ಲಿ ತುಳಸಿ ವೃಂದಾವನ ಏಕಿರಬೇಕು?
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕ ಪ್ರಕಾರವಾಗಿ ಅಲಂಕರಿಸುತ್ತದೆ.
ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ತುಳಸಿ ಕಾನನಂ ಯತ್ರ ಯತ್ರ ಪದ್ಮವ ನಾನಿಚ|
ವಸಂತಿ ವೈಷ್ಣ ವಾಯತ್ರ ತತ್ರ ಸನ್ನಿಹಿತೋ ಹರಿ:||
ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದುಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ.
ತುಳಸಿಯ ಸೃಷ್ಟಿ :--
ದೇವ-ದಾನವರು ಕ್ಷೀರ ಸಮುದ್ರವನ್ನು ಮಥಿಸಿದಾಗ ಹಲವು ವಸ್ತು ವಿಶೇಷಗಳ ಜೊತೆಗೆ ಅಮೃತವೂ ಉದಯಿಸಿತು. ಅದನ್ನು ಪಡೆಯಲೋಸುಗ ದೇವದಾನವರ ಮಧ್ಯೆ ಉಂಟಾದ ತುಮುಲದಲ್ಲಿ ಅಮೃತದ ಕೆಲವು ಬಿಂದುಗಳು ಭೂಮಿಯ ಮೇಲೆ ಬಿದ್ದುದು.
ಆ ಸ್ಥಳಗಳಲ್ಲಿ ತುಳಸಿ ಸಸ್ಯಗಳಾಗಿ ಅವು ಬೆಳೆದವು. ಇನ್ನೂ ಕೆಲವರು ಹೇಳುವಂತೆ ಸಮುದ್ರ ಮಥನ ಕಾಲದಲ್ಲಿ ಅಮೃತವು ಉದಯಿಸಿದಾಗ ಶ್ರೀ ವಿಷ್ಣುವಿನ ನೇತ್ರಗಳಿಂದ ಆನಂದಾಶ್ರುಗಳು ಅದರಲ್ಲಿ ಬಿದ್ದಾಗ ತುಳಸಿಯ ಉತ್ಪತ್ತಿ(ಸೃಷ್ಟಿ)ಯಾಯಿತು.
ಅದರಿಂದಾಗಿ ತುಳಸಿಯು ಹಿಂದೂಗಳಿಗೆ ಪೂಜನೀಯ ವಾಯಿತು. ತಾನು ಬೇರೆ ಯಾವುದರ ತುಲನೆಗೂ ಸರಿ ಸಾಟಿಯಾಗದಿದ್ದುದರಿಂದ ಅದಕ್ಕೆ ತುಳಸಿ ಎಂಬ ಹೆಸರು ಅರ್ಥಪೂರ್ಣವಾಯಿತು.
ತುಳಸಿಯಿಂದಾಗುವ ಆಧ್ಯಾತ್ಮಿಕ ಮತ್ತು ಶಾರೀರಿಕ ಲಾಭಗಳು :---
ತುಳಸಿಯಲ್ಲಿ ರಾಮ ತುಳಸಿ, ಕೃಷ್ಣ ತುಳಸಿ ಹಾಗೂ ರಾಜ ತುಳಸಿ ಎಂಬ ಅನೇಕ ಪ್ರಭೇದಗಳಿವೆ. ರಾಮ ತುಳಸಿಯ ಬಣ್ಣವು ಬಿಳಿ, ಕೃಷ್ಣ ತುಳಸಿಯು ಸ್ವಲ್ಪ ಕಪ್ಪು. ರಾಮ ತುಳಸಿಯಿಂದ ಶ್ರೀರಾಮನ ತಾರಕ ತತ್ತ್ವದ ಪ್ರಕ್ಷೇಪಣೆಯಾಗುತ್ತದೆ.
ಕೃಷ್ಣ ತುಳಸಿಯಿಂದ ಅನಿಷ್ಟ ಶಕ್ತಿಗಳ ನಾಶಕ್ಕೆ ಪೂರಕ ವಾದ ಶ್ರೀಕೃಷ್ಣನ ಮಾರಕ ತತ್ತ್ವದ ಪ್ರಕ್ಷೇಪಣೆ ಯಾಗುತ್ತದೆ.
ಅಶ್ವತ್ಥವೃಕ್ಷದಂತೆ ತುಳಸಿಯಿಂದಲೂ ಮಾನವನಿಗೆ ಪ್ರಾಣಶಕ್ತಿಯು (ಆಮ್ಲಜನಕವು) ಹೇರಳವಾಗಿ ದೊರೆಯುವುದರಿಂದ ತುಳಸಿಗೆ ಪ್ರದಕ್ಷಿಣೆಗಳನ್ನು ಹಾಕುವುದು ಲಾಭದಾಯಕವಾಗಿದೆ.
ತುಳಸಿಯ ಕಷಾಯವು ಕೆಮ್ಮು, ನೆಗಡಿ, ಶೀತ, ಶ್ಲೇಷ್ಮಾದಿಗಳ ನಿವಾರಕವಾಗಿದೆ. ವೃಂದಾವನದಲ್ಲಿ ಉದುರಿದ ಎಲೆಗಳಿಂದ ಮಣ್ಣುಗೂಡಿದ ಅದರ ಮೃತ್ತಿಕೆಯನ್ನು ಶರೀರದಲ್ಲಿ ಕುಷ್ಠಾದಿ ಚರ್ಮರೋಗ ಗಳಿದ್ದಲ್ಲಿಗೆ ಹಚ್ಚಿಕೊಂಡರೆ ರೋಗನಿವಾರಣೆ ಯಾಗುವುದೆಂದು ಹೇಳಲಾಗಿದೆ.
ತುಳಸಿಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಉರಿಸಿಡಬೇಕು? ಏಕೆ?
ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀ ಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗ ತೊಡಗುತ್ತದೆ.
ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ.
ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು,
ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇತ್ಯಾದಿಗಳನ್ನೂ ಮಾಡುವುದು ಅಗತ್ಯವಾಗಿದೆ.
ಗೃಹಿಣಿಯರು ಸಂಜೆಯ ಹೊತ್ತು ಶುಚಿರ್ಭೂತರಾಗಿ ಸೂರ್ಯಾಸ್ತದ ಸಮಯಕ್ಕೆ ಸರಿಯಾಗಿ ತುಳಸಿ ಕಟ್ಟೆಯಲ್ಲಿ ತುಳಸಿಯ ಕಡೆಗೆ ದೀಪ ಜ್ವಾಲೆಯು ಮುಖಮಾಡಿರುವಂತೆ ತುಪ್ಪದ ಯಾ ಎಳ್ಳೆಣ್ಣೆಯ ದೀಪವನ್ನು ಸಾತ್ವಿಕ ಊದುಬತ್ತಿಯನ್ನು ಉರಿಸಿಟ್ಟು ತುಳಸಿಗೆ ಪ್ರದಕ್ಷಿಣೆ ಗೈದು ನಮಸ್ಕರಿಸಬೇಕು.
ತುಳಸಿಯ ಸ್ತೋತ್ರವನ್ನೂ ಹೇಳಬಹುದು. ಹೀಗೆ ಮಾಡುವುದರಿಂದ ಆ ದೀಪದ ಬೆಳಕಿನಲ್ಲಿ ತುಳಸಿಯು ಬ್ರಹ್ಮಾಂಡದಿಂದ ಶ್ರೀಕೃಷ್ಣನ ಮಾರಕ ತತ್ತ್ವವನ್ನು ಆಕರ್ಷಿಸಿ ತುಳಸಿಕಟ್ಟೆಯ ಹಾಗೂ ಮನೆಯ ಸುತ್ತಲೂ ಅದನ್ನು ಪ್ರಕ್ಷೇಪಿಸಿ ಕಣ್ಣಿಗೆ ಗೋಚರವಾಗದ ಸೂಕ್ಷ್ಮ ರೂಪದ ಸಂರಕ್ಷಣಾ ಕವಚವನ್ನು ನಿರ್ಮಿಸಿ ಅನಿಷ್ಟ ಶಕ್ತಿಗಳಿಂದ ಜೀವಗಳಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದು.
ದೀಪ ಜ್ಯೋತಿಯ ಸ್ತೋತ್ರ :---
ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಂಪದಃ
ಶತ್ರುಬುದ್ಧಿ ವಿನಾಶಾಯ ದೀಪಜ್ಯೋತಿರ್ನಮೋಸ್ತುತೆ|
ದೀಪಜ್ಯೋತಿಃ ಪರಬ್ರಹ್ಮಾ ದೀಪಜ್ಯೋತಿರ್ಜನಾರ್ದನಃ
ದೀಪೋ ಹರತಿ ಪಾಪಾನಿ ಸಂಧ್ಯಾದೀಪ ನಮೋಸ್ತುತೇ||
ಶ್ರೀ ತುಲಸಿ ಸ್ತೋತ್ರದ ಒಂದು ಶ್ಲೋಕವು ಇಂತಿದೆ:--
ಯನ್ಮೂಲೇ ಸರ್ವ ತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ |
ಯದಗ್ರೇ ಸರ್ವ ವೇದಾಶ್ಚ ತುಲಸಿ ತ್ವಾಂ ನಮಾಮ್ಯಹಮ್||
ಮೇಲಿನ ಈ ಎರಡು ಶ್ಲೋಕಗಳನ್ನು ಅರ್ಥೈಸಿಕೊಂಡರೆ ಮನೆಯ ಅಂಗಳದಲ್ಲಿ ತುಳಸಿ ವೃಂದಾವನ ಹಾಗೂ ಸಂಧ್ಯಾಕಾಲದಲ್ಲಿ ಅದಕ್ಕೆ ದೀಪವನ್ನಿರಿಸುವುದರಿಂದ ಅವುಗಳು ಮನೆ ಮಂದಿಗೂ ಮನೆಗೂ ಸಂರಕ್ಷಕ ದೇವತೆಗಳಂತೆ ಕೆಲಸ ಮಾಡುವುದರ ಮಹತ್ವವು ತಿಳಿಯುತ್ತದೆ.
ಮನೆಯಂಗಳದಲ್ಲಿ ತುಳಸಿ ವೃಂದಾವನವಿರುವುದರ ಅವಶ್ಯಕತೆಯು ಎಷ್ಟಿದೆ ಎಂಬುದರ ಅರಿವಾಗುತ್ತದೆ.
ತುಳಸಿ ಕಟ್ಟೆಯ ನಿರ್ಮಾಣಕ್ಕೆ ಜಾಗ ಗುರುತಿಸುವುದು ಹೇಗೆ?
ನಿಮ್ಮ ಮನೆಯು ಪೂರ್ವಾಭಿಮುಖವಾಗಿದೆ ಯೆಂದಾದರೆ ನೀವು ನಿಮ್ಮ ಮನೆಯಂಗಳದಲ್ಲಿ ಮನೆಯ ಕಡೆಗೆ ಮುಖಮಾಡಿ ನಿಲ್ಲಬೇಕು.
ಮುಖ್ಯದ್ವಾರದಿಂದ ಬಲಗಡೆಗೆ ಅರ್ಧಕೋಲು (ಇನ್ನು ಮುಂದೆ ಒಂದು ಕೋಲು ಅಂದರೆ ೨೮ ಇಂಚು ಎಂದು ತಿಳಿಯಬೇಕು) ದೂರದಲ್ಲಿ ಗೋಡೆಯ ಅಥವಾ ಸಿಟೌಟ್ನ ಗೋಡೆಗೆ ಒಂದು ಗುರುತು ಮಾಡಿರಿ.
ಅಲ್ಲಿಂದ ಪೂರ್ವದಿಕ್ಕಿನೆಡೆಗೆ ಲಂಬವಾಗಿ ನಿಮ್ಮ ಮನೆಯ ಹಾಗೂ ಅಂಗಳದ ಅಗಲವನ್ನು ಅನುಲಕ್ಷ್ಯಿಸಿ ಅದಕ್ಕೆ ಅನುರೂಪವಾಗುವಂತೆ ೩ ಕೋಲು/ ೫ ಕೋಲು/ ೭ ಕೋಲು ದೂರದಲ್ಲಿ ತುಳಸಿಕಟ್ಟೆಯನ್ನು ನಿರ್ಮಿಸಬಹುದು.
ಆಗ ಮನೆ ಬಾಗಿಲಿನಿಂದ ಈಶಾನ್ಯ ದಿಕ್ಕಿನತ್ತ ತುಳಸಿಕಟ್ಟೆ ಯಿರುವುದು. ಮನೆಯು ಪಶ್ಚಿಮಾಭಿಮುಖವಾಗಿ ಇದ್ದರೆ ಯಾ ಉತ್ತರಾಭಿ ಮುಖವಾಗಿದ್ದರೆ ಮನೆಯ ಮುಖ್ಯ ದ್ವಾರದೆದುರು ನಿಂತು ಎಡಗಡೆಗೆ ಅರ್ಧ ಕೋಲು ದೂರದ ಬಿಂದುವಿನಿಂದ ಅನುಕ್ರಮವಾಗಿ (ಪಶ್ಚಿಮಾಭಿಮುಖವಾಗಿ ಯಾ ಉತ್ತರಾಭಿಮುಖವಾಗಿ ೩ ಕೋಲು/ ೫ ಕೋಲು/ ೭ ಕೋಲು ದೂರದಲ್ಲಿ ತುಳಸಿಕಟ್ಟೆಯನ್ನು ನಿರ್ಮಿಸಬಹುದು.
ಅಂದರೆ ಅನುಕ್ರಮವಾಗಿ ಮನೆಯ ಮುಖ್ಯದ್ವಾರದಿಂದ ವಾಯುವ್ಯ ಅಥವಾ ಈಶಾನ್ಯ ದಿಕ್ಕಿಗೆ ತುಳಸಿಕಟ್ಟೆ ಯನ್ನು ನಿರ್ಮಿಸಬಹುದು.
ನಿಮ್ಮ ಮನೆಯ ದಿಕ್ಕು ಸ್ವಲ್ಪ ತಿರುಗಿ ಇದ್ದರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಇದು ಜನ ಸಾಮಾನ್ಯರು ತುಳಸಿಕಟ್ಟೆಯ ನಿರ್ಮಾಣಕ್ಕೆ ಜಾಗ ಗುರುತಿಸ ಬಹುದಾದ ಸುಲಭ ವಿಧಾನವಾಗಿದೆ.
ತುಳಸಿಕಟ್ಟೆಯ ಉದ್ದಗಲ ಅಳತೆಗಳು :--
ಸಾಮಾನ್ಯವಾಗಿ ತುಳಸಿಕಟ್ಟೆಯ ಉದ್ದ, ಅಗಲ, ಎತ್ತರಗಳು ತಲಾ ೧೯ ಅಂಗುಲ (೧೯) ಆಗಿದ್ದರೆ ಉತ್ತಮ.
ತುಳಸಿಕಟ್ಟೆಯ ಎತ್ತರವು ಮನೆಯ ಪಂಚಾಂಗದ ಮಟ್ಟದಿಂದ ಒಂದು ಅಂಗುಲವಾದರೂ ಕಡಿಮೆಯಿರಬೇಕು. ಕೊನೆಯ ಪಕ್ಷ ಪಂಚಾಂಗದ ಮಟ್ಟಕ್ಕೆ ಸಮಾನಾಂತರವಾಗಿರಬಹುದು.
ಅದಕ್ಕಿಂತ ಹೆಚ್ಚು ಎತ್ತರವು ಸೂಕ್ತವಲ್ಲ. ಹಾಗೆಂದು ಈಗಾಗಲೇ ಇರುವ ತುಳಸಿಕಟ್ಟೆಯನ್ನು ಹಾಗೆಯೇ ಇರಗೊಡಿಸುವುದು ಒಳ್ಳೆಯದು.
ಯಾವ ದಿನಗಳಂದು ತುಳಸಿ ಗಿಡವನ್ನು ನೆಡಬಹುದು?
ಸಾಮಾನ್ಯವಾಗಿ ಶನಿವಾರ, ಬುಧವಾರ ಯಾ ಗುರುವಾರ ದಿನಗಳಂದು ಬೆಳಗ್ಗಿನ ಹೊತ್ತು ಶ್ರೀ ಮಹಾ ವಿಷ್ಣುವಿಗೆ ಪ್ರಾರ್ಥನೆ ಮಾಡಿ ತುಳಸಿ ಗಿಡವನ್ನು ನೆಟ್ಟು ರಕ್ಷಿಸಿಕೊಳ್ಳಬಹುದು.
ತುಳಸಿಕಟ್ಟೆಯಲ್ಲಿ ಯಾವ ಜಾತಿಯ ಗಿಡವನ್ನು ನೆಡಬಹುದು?
ತುಳಸಿಕಟ್ಟೆಯಲ್ಲಿ ತಾರಕತತ್ತ್ವವನ್ನು ಆಕರ್ಷಿಸಿ ಪ್ರಕ್ಷೇಪಿಸುವ ಶ್ರೀರಾಮ ತುಳಸಿ (ಬಿಳಿ ತುಳಸಿ)ಯನ್ನು ಸುತ್ತಮುತ್ತ ಮಾರಕ ಆಕರ್ಷಿಸಿ ಪ್ರಕ್ಷೇಪಿಸುವ ಶ್ರೀಕೃಷ್ಣ ತುಳಸಿ (ನಸುಗಪ್ಪು ಬಣ್ಣದ ತುಳಸಿ)ಯನ್ನೂ ನೆಟ್ಟು ಪೋಷಿಸಿದರೆ ಮನೆಯವರಿಗೆ ಈ ಎರಡೂ ತತ್ತ್ವಗಳ ಲಾಭವಾಗುವುದು.
ಅನ್ಯ ವಸ್ತು ವಿಶೇಷಗಳೊಂದಿಗೆ ತುಲನೆಯೇ ಮಾಡಲಾಗದ ತುಳಸಿಯ ಬಗೆಗಿನ ಮಹತ್ವದ ಸಂಗತಿಗಳು ಇನ್ನೂ ಬಹಳವಿದೆ.
ಮುಂಬರುವ ಉತ್ಥಾನ ದ್ವಾದಶಿಯಂದು ಹಾಗೂ ಮುಂದಿನ ವರ್ಷಗಳಲ್ಲಿ ಶ್ರೀ ತುಳಸಿಪೂಜೆಯನ್ನು ಶ್ರೀಕೃಷ್ಣ ದಾಮೋದರನೊಂದಿಗೆ ವಿವಾಹ ಮಾಡುವ ಮೂಲಕ ಅತ್ಯಂತ ಶ್ರದ್ದಾ ಭಕ್ತಿಭಾವಗಳಿಂದ ಆಚರಿಸಿ ದೈವಾನುಗ್ರಹ ಪಡೆಯೋಣ.
ಆದಿನ ಅನಿವಾರ್ಯವಾಗಿ ಪೂಜೆಮಾಡಲಾಗದಿದ್ದರೆ ಅನಂತರದ ಹುಣ್ಣಿಮೆಯ ತನಕ ಯಾವುದಾದರೊಂದು ದಿನ ಪೂಜೆ ಮಾಡಬಹುದು.
ತುಳಸಿಪೂಜೆಯ ಸಂದರ್ಭದಲ್ಲಿ ತಮೋ ಗುಣಿಯಾದ ಮೇಣದ ಬತ್ತಿಗಳನ್ನು ಉರಿಸಿಡದೆ ಸತ್ತ್ವಗುಣೀ ಎಳ್ಳೆಣ್ಣೆಯ ಹಣತೆಗಳನ್ನು ದೇದೀಪ್ಯ ವಾತಾವರಣ ವನ್ನು ನಿರ್ಮಿಸಿ ಸತ್ತ್ವಗುಣದ ಸಂವರ್ಧನೆ ಮಾಡುವುದು ತೀರಾ ಅವಶ್ಯವಾಗಿದೆ ಎಂಬುದರ ಅರಿವು ನಮಗೆಲ್ಲರಿಗೂ ಇರಲಿ.
ತುಳಸಿ ಗಿಡದಲ್ಲಾಗುವ ಬದಲಾವಣೆಗಳಿಂದ ಮುಂದೆ ಮನೆಯಲ್ಲಿ ನಡೆಯುವ ಪರಿಣಾಮಗಳ ಬಗ್ಗೆ ಹೇಳ ಬಹುದಂತೆ.!
ತುಳಸಿ ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಈ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣ ಪಡಿಸ ಬಹುದು. ಆಧ್ಯಾತ್ಮಿಕವಾಗಿಯೂ ತುಳಸಿ ಗಿಡ ಮನೆಯಲ್ಲಿದ್ದರೆ ಒಳ್ಳೆಯದೆಂದು ಅದರಿಂದ ನಮೆಗೆಲ್ಲವೂ ಒಳ್ಳೆಯದಾಗುತ್ತದಂತೆ. ಆದರೆ,ಒಮ್ಮೊಮ್ಮೆ ಮನೆಯಲ್ಲಿರುವ ತುಳಸಿ ಗಿಡದ ಸಹಜ ಬಣ್ಣದಲ್ಲಿ ಬದಲಾಣೆ ಆಗುವುದು, ಇಲ್ಲವೆ ಎಲೆಗಳು ಒಣಗಿ ಉದುರಿ ಹೋಗುವುದು ಮೊದಲಾದುವುಗಳನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ. ಹೀಗೆ ಭೌತಿಕವಾಗಿ ನಡೆಯುವ ಪ್ರಕ್ರಿಯೆಗಳಿಂದಾಗಿ ಆ ಮನೆಯಲ್ಲಿ ನಡೆಯ ಬಹುದಾದ ಆಗು ಹೋಗುಗಳ ಬಗ್ಗೆ ತಿಳಿದು ಕೊಳ್ಳ ಬಹುದಂತೆ. ಈ ನಿಟ್ಟಿನಲ್ಲಿ ತುಳಸಿ ಗಿಡದಲ್ಲಾಗುವ ಬದಲಾವಣೆಗಳನ್ನು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಿಳಿದು ಕೊಳ್ಳೋಣ.
1. ತುಳಸಿ ಗಿಡದ ಎಲೆಗಳ ಬಣ್ಣ ಒಮ್ಮೆಲೇ ಬದಲಾದರೆ… ಆ ಮನೆಯ ಪೈಕಿ ಯಾರೋ ಒಬ್ಬರು ಮಾಯ ಮಾಟದಂತಹ ಪ್ರಯೋಗಕ್ಕೆ ಈಡಾಗುತ್ತಾರೆಂಬುದನ್ನು ಸೂಚಿಸುತ್ತದೆ. ಹೀಗೆ ಪ್ರಯೋಗ ನಡೆಸಿ ಅವರನ್ನು ಹಾಳು ಮಾಡ ಬೇಕೆಂದು ಕೊಂಡರೆ ಮಾತ್ರ ಈ ರೀತಿ ಎಲೆಗಳ ಬಣ್ಣ ಬದಲಾಗುತ್ತದಂತೆ.
2. ದಿನಾಲೂ ನೀರು ಹಾಕಿ ಚೆನ್ನಾಗಿ ಪೋಷಿಸುತ್ತಿದ್ದರೂ, ತುಳಸಿ ಗಿಡದ ಎಲೆಗಳು ಒಣಗಿ ಹೋಗುತ್ತಿದ್ದರೆ; ಆ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗುತ್ತರಂತೆ. ಯಾವುದಾದರೂ ಒಂದು ಗಂಭೀರ ಕಾಯಿಲೆಗೆ ತುತ್ತಾಗುವ ಅವಕಾಶವಿರುತ್ತದಂತೆ.
3. ಒಂದು ವೇಳೆ ತುಳಸಿ ಗಿಡಕ್ಕೆ ನೀರೆರೆಯದಿದ್ದರೂ, ಎಲೆಗಳು ಹಸಿರಾಗಿ, ಚೆನ್ನಾಗಿ ಬೆಳೆಯುತ್ತಿದ್ದರೆ, ಆ ಮನೆಯವರಿಗೆಲ್ಲರಿಗೂ ಅದೃಷ್ಟ ಕೂಡಿ ಬರುತ್ತದಂತೆ. ಭವಿಷ್ಯದಲ್ಲಿ ಅಂತಹವರಿಗೆ ಹೇರಳವಾಗಿ ಸಂಪತ್ತು ಬರುತ್ತದಂತೆ.
4. ತುಳಸಿ ಗಿಡವನ್ನು ಬೆಳೆಸುತ್ತಿರುವ ಕುಂಡದಲ್ಲಿ, ಮತ್ತೊಂದು ಸಸಿ ತನ್ನಷ್ಟಕ್ಕೆ ತಾನೇ ಹುಟ್ಟಿದರೆ, ತಾವು ಅಂದು ಕೊಂಡದ್ದನ್ನು ಸಾಧಿಸುತ್ತಾರಂತೆ.
5. ಇತರೆ ಕಾರಣಗಳಿಂದಾಗಿ ತುಳಸಿ ಗಿಡ ಒಣಗುತ್ತಿದ್ದರೆ, ಒಡನೆಯೇ ನೀರು ಹಾಕಿ ಚೆನ್ನಾಗಿ ಬೆಳೆಯುವಂತೆ ನೋಡಿ ಕೊಳ್ಳ ಬೇಕಂತೆ. ಹಾಗೆ ಮಾಡದಿದ್ದರೆ ಕೇಡು ಸಂಭವಿಸುತ್ತದಂತೆ.
6. ತುಳಸಿ ಗಿಡ ಹಚ್ಚ ಹಸಿರಾಗಿರುವ ಮನೆಯಲ್ಲಿ ಯಾವಾಗಲೂ ಸುಖ ಸಂತೋಷಗಳು ತುಂಬಿ ತುಳುಕಾಡುತ್ತಿರುತ್ತವಂತೆ. ಅಂತಹ ಮನೆಯವರಿಗೆ ಯಾವುದೇ ಸಮಸ್ಯೆಗಳು ಬರುವುದಿಲ್ಲವಂತೆ.
*🕉ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು🕉*
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ|
ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:||
ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ.
ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು
ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ.
ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ.
ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇತ್ಯಾದಿಗಳನ್ನೂ ಮಾಡುವುದು ಅಗತ್ಯವಾಗಿದೆ.
ಗೃಹಿಣಿಯರು ಸಂಜೆಯ ಹೊತ್ತು ಶುಚಿರ್ಭೂತರಾಗಿ ಸೂರ್ಯಾಸ್ತದ ಸಮಯಕ್ಕೆ ಸರಿಯಾಗಿ ತುಳಸಿಕಟ್ಟೆಯಲ್ಲಿ ತುಳಸಿಯ ಕಡೆಗೆ ದೀಪ ಜ್ವಾಲೆಯು ಮುಖಮಾಡಿರುವಂತೆ ತುಪ್ಪದ ಯಾ ಎಳ್ಳೆಣ್ಣೆಯ ದೀಪವನ್ನು ಸಾತ್ವಿಕ ಊದುಬತ್ತಿಯನ್ನು ಉರಿಸಿಟ್ಟು ತುಳಸಿಗೆ ಪ್ರದಕ್ಷಿಣೆ ಗೈದು ನಮಸ್ಕರಿಸಬೇಕು.
ತುಳಸಿಯ ಸ್ತೋತ್ರವನ್ನೂ ಹೇಳಬಹುದು. ಹೀಗೆ ಮಾಡುವುದರಿಂದ ಆ ದೀಪದ ಬೆಳಕಿನಲ್ಲಿ ತುಳಸಿಯು ಬ್ರಹ್ಮಾಂಡದಿಂದ ಶ್ರೀಕೃಷ್ಣನ ಮಾರಕ ತತ್ತ್ವವನ್ನು ಆಕರ್ಷಿಸಿ ತುಳಸಿಕಟ್ಟೆಯ ಹಾಗೂ ಮನೆಯ ಸುತ್ತಲೂ ಅದನ್ನು ಪ್ರಕ್ಷೇಪಿಸಿ ಕಣ್ಣಿಗೆ ಗೋಚರವಾಗದ ಸೂಕ್ಷ್ಮರೂಪದ ಸಂರಕ್ಷಣಾ ಕವಚವನ್ನು ನಿರ್ಮಿಸಿ ಅನಿಷ್ಟ ಶಕ್ತಿಗಳಿಂದ ಜೀವಗಳಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದು
ದೀಪ ಜ್ಯೋತಿಯ ಸ್ತೋತ್ರವು ಈ ಕೆಳಗೆ ಕಂಡಂತಿರುವುದು
ಶುಭಂ ಕರೋತಿ ಕಲ್ಯಾಣಂ
ಆರೋಗ್ಯಂ ಧನಸಂಪನದಃ
ಶತ್ರುಬುದ್ಧಿ ವಿನಾಶಾಯ
ದೀಪಜ್ಯೋತಿರ್ನಮೋಸ್ತುತೆ|
ದೀಪಜ್ಯೋತಿಃ ಪರಬ್ರಹ್ಮಾ
ದೀಪಜ್ಯೋತಿರ್ಜನಾರ್ದನಃ
ದೀಪೋ ಹರತಿ ಪಾಪಾನಿ
ಸಂಧ್ಯಾದೀಪ ನಮೋಸ್ತುತೇ||
No comments:
Post a Comment