🕉 *ಬ್ರಾಹ್ಮೀ ಮುಹೂರ್ತ ವಿಚಾರ ಧಾರೆ* 🕉
ಆಯುರ್ವೇದದ ಪ್ರಕಾರ
ಸೂರ್ಯ ಕಿರಣ, ದಿಕ್ಕು ಮತ್ತು ಭೂಮಿಯ ಚಲನೆಯನ್ನು ಆಧರಿಸಿ ವಾಸ್ತುಶಾಸ್ತ್ರ ರಚಿಸಲಾಗಿದೆ. ಸೂರ್ಯನ ಕಿರಣಗಳು ಏಳು ವಿಭಿನ್ನ ವಿಧಗಳನ್ನು ಒಳಗೊಂಡಿದೆ.
ಪ್ರತಿಯೊಂದು ಕಿರಣವೂ ದಿಕ್ಕನ್ನು ಅವಲಂಬಿಸಿ ನೆಗೆಟಿವ್ ಮತ್ತು ಪೊಸೆಟಿವ್ ಎನರ್ಜಿಯನ್ನು ತುಂಬುತ್ತವೆ. ಈ ಏಳು ಪ್ರಕಾರದ ಕಿರಣಗಳನ್ನು ಸಪ್ತದೇವತಾ ಎಂದೂ ಕೂಡ ಕರೆಯುತ್ತಾರೆ. ಆದ್ದರಿಂದ ಆಯಾ ಕಾಲದಲ್ಲಿ ಆಯಾ ಕೆಲಸಗಳನ್ನು ಪೂರೈಸಬೇಕು.
ನಸುಕಿನ 3ರಿಂದ 4.30ರೊಳಗಿನ ಅವಧಿಗೆ ಬ್ರಾಹ್ಮಿ ಮುಹೂರ್ತ ಎನ್ನುತ್ತಾರೆ.ನಿಖರವಾಗಿ ಬ್ರಾಹ್ಮಿ ಮುಹೂರ್ತವು ಸೂರ್ಯೋದಯಕ್ಕೆ ಮೊದಲು ಒಂದೂವರೆ ಗಂಟೆಗಳ ಅವಧಿ ಅಥವಾ ಹೆಚ್ಚು ನಿಖರವಾಗಿ 1ಗಂಟೆ 36 ನಿಮಿಷಗಳು ಅಂದರೆ 96 ನಿಮಿಷಗಳು = ೨ ಮುಹೂರ್ತ ಅಥವಾ ೪ ಘಟಿಕಾ.
(ಒಂದು ಮುಹೂರ್ತದ ಅವಧಿ 48 ನಿಮಿಷಗಳು)
4.30ರಿಂದ 6 ಗಂಟೆಯೊಳಗಿನ ಅವಧಿ ದೇವತಾ ಪ್ರಾರ್ಥನೆಗೆ ಅತ್ಯಂತ ಸೂಕ್ತ ಸಮಯ.
ಈ ಅವಧಿಯನ್ನು ಉಷಾಕಾಲ ಎಂದು ಕರೆಯಲಾಗುತ್ತದೆ.
ಈ ಬ್ರಾಹ್ಮಿಕಾಲ ಮತ್ತು ಉಷಾಕಾಲವು
ಚೈತನ್ಯದಿಂದ ತುಂಬಿರುತ್ತದೆ.
ನಸುಕಿನ 3.45 ರಿಂದ 6:00 ರವರೆಗಿನ ಸಮಯಕ್ಕೆ ಪ್ರಾಚೀನ ಋಷಿಮುನಿಗಳು ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ
ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ.
ಬೆಳಗಿನ ಹೊತ್ತು ನಮ್ಮ ಮನಸ್ಸು ಫ್ರೆಶ್ ಆಗಿರುತ್ತದೆ. ಆಯಾಸವೆಲ್ಲ ನಿದ್ದೆಯಲ್ಲಿ ಕಳೆದು ದೇಹ ನವ ಚೈತನ್ಯದಿಂದ ಕೂಡಿರುತ್ತದೆ. ಇನ್ನು ಬೆಳಗಿನ ಜಾವದಲ್ಲಿ ಮೆದುಳಿನ ನೆನಪಿನ ಕೋಶಗಳು ಚುರುಕಾಗಿ ಕೆಲಸ ಮಾಡುತ್ತವೆ ಎಂದು ವೈದ್ಯರು ಕೂಡ ಹೇಳುತ್ತಾರೆ.
ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ.
ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.
ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ
೪೧ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ.
*ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ
ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ.*
ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ.
ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ.
ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ಕೆಲವು
ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.
ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ.
ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.
ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಲೋಕಾಃ ಸಮಸ್ತಾಃ ಸುಖಿನೋ ಭವಂತು..
No comments:
Post a Comment