Monday, 6 January 2020

ಹೆಣ್ಣು ಮಕ್ಕಳ ಕೂದಲು ಅತ್ಯಂತ ಪವಿತ್ರ

ಹೆಣ್ಣು ಮಕ್ಕಳ ಕೂದಲು ಅತ್ಯಂತ ಪವಿತ್ರ

ಮುತ್ತೈದೆಯರ ಕೂದಲು ಅಮೃತ ಸ್ವರೂಪ. 
ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. 

ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. (ಹರಕೆ ಇತ್ಯಾದಿ ಹೊರತು ಪಡಿಸಿ)

ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ. 
ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು. 

ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.

ಇದಲ್ಲದೆ ರಜಸ್ವಲೆಯಾದಾಗ, ಆಶೌಚವಿದ್ದಾಗ, ಅಸ್ಪರ್ಶರನ್ನು ಮುಟ್ಟಿದರೆ ಸಚೈಲವಾಗಿ ತಲೆಸ್ನಾನ ಮಾಡಬೇಕು. ಆದ್ದರಿಂದ ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.
ಸಂಗ್ರಹ: ಪ್ರಶಾಂತಭಟ್ ಕೋಟೇಶ್ವರ

No comments:

Post a Comment