🕉 ಶ್ರೀ ಗುರುಭ್ಯೋ ನಮಃ 🕉 *ಶ್ರೀ ರಾಮ ರಕ್ಷಾ ಸ್ತೋತ್ರ*
ಈ ಸ್ತೋತ್ರವನ್ನು ಸಾಕ್ಷಾತ್ ಭಗವಾನ್ ಶಂಕರರು ಬುಧಕೌಶಿಕ ಋಷಿಗಳಿಗೆ ತನ್ನ ಕನಸಿನಲ್ಲಿ ಬಂದು ಹೇಳಿದ್ದಾಗಿದೆ..
🔯 ಯಾರು ತುಂಬಾ ಸಮಸ್ಯೆಗಳು, ವನವಾಸದ ಜೀವನ, ಜೀವನ ಸಾಕು ಅನ್ನಿಸಿದೆ, ಬೇಸರದ ಜೀವನ ಸಾಗಿಸುತ್ತಿದ್ದಾರೋ...
🔯 ಯಾರ ಸಂಸಾರದಲ್ಲಿ ಮಕ್ಕಳು ದಾರಿ ತಪ್ಪುತ್ತಿರುತ್ತಾರೋ..
🔯 ಯಾರ ಮನೆಯಲ್ಲಿ ಗಂಡ ಹೆಂಡತಿ ಅನ್ಯೋನ್ಯವಾಗಿ ಇರುವುದಿಲ್ಲವೋ..
🔯 ಯಾರ ಮನೆಯಲ್ಲಿ ಗಂಡ ಸ್ತ್ರೀಲೋಲನಾಗಿರುತ್ತಾನೋ..
🔯 ಯಾರ ಮನೆಯಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರು ಏಳಿಗೆಯಾಗುತ್ತಿಲ್ಲವೋ, ತುಂಬಾ ಹಣ ಇದ್ದರೂ ನೆಮ್ಮದಿ ಇಲ್ಲದಾಗಿರುತ್ತದೋ..
🔯 ಯಾರ ಮನೆಯಲ್ಲಿ ಹೆಣ್ಣು ಒಂಟಿಯಾಗಿ ಜೀವನ ಮಾಡುತ್ತಿದ್ದು ಯಾರೂ ರಕ್ಷಣೆ ಇಲ್ಲದಾಗಿರುತ್ತದೋ..
ಅಲ್ಲೆಲ್ಲಾ ಶ್ರೀ ರಾಮ ರಕ್ಷಣೆಗಾಗಿ ನಿಂತಿರುತ್ತಾರಂತೆ..!!
ಇಂತಹ ಇನ್ನೂ ಅನೇಕ ಎಲ್ಲಾ ತರಹದ ಸಮಸ್ಯೆ ಇರುವವರು ಪ್ರತಿದಿನ ರಾಮರಕ್ಷಾ ಸ್ತೋತ್ರವನ್ನು ೨ ಸಾರಿ ಓದಿ, ಹಣ್ಣು ನೈವೇದ್ಯ ಮಾಡಿದರೆ ಬೇಗ ಶುಭಫಲ ಕಾಣುವಿರಿ..!!
ಬರೀ ಶ್ರೀ ರಾಮಚಂದ್ರನ ಪೂಜೆ ಫಲ ಕೊಡುವುದಿಲ್ಲ,
ರಾಮದೇವರ ಪೂಜೆ ಮಾಡಿದ ನಂತರ ಆಂಜನೇಯನ ಪೂಜೆ ಮಾಡಿದರೆ ಮಾತ್ರ ಪೂರ್ಣಫಲ ಪ್ರಾಪ್ತವಾಗುವುದು..!
ರಾಮನ ಬಿಟ್ಟು ಆಂಜನೇಯನನ್ನು ಅಥವಾ ಆಂಜನೇಯ ದೇವರನ್ನು ಬಿಟ್ಟು ರಾಮನನ್ನು ಪೂಜಿಸಿದರೆ ಫಲ ಬರುವುದಿಲ್ಲ..
ರಾಮದೇವರಿಗೆ ನೈವೇದ್ಯ ಮಾಡಿದ ಹಣ್ಣನ್ನು ಆಂಜನೇಯ ದೇವರಿಗೆ ಅರ್ಪಿಸಿದರೆ, ಮನೆಯಲ್ಲಿ ಶ್ರೀ ಸಂಜೀವರಾಯರು ಸ್ವತಃ ಆ ಮನೆಯಲ್ಲಿ ನೆಲೆಸಿ, ಮನೆಯನ್ನು ರಕ್ಷಿಸುತ್ತಾರೆ..
ಯಾರು ರಾಮದೇವರ ಪಾದಕ್ಕೆ ಅರ್ಪಿಸಿದ ತುಳಸಿಯನ್ನು ಆಂಜನೇಯ ದೇವರ ಶಿರದ ಮೇಲಿಟ್ಟು ಪೂಜಿಸುತ್ತಾರೋ ಅವರಿಗೆ ರಾಮದೇವರ ಪೂರ್ಣ ಅನುಗ್ರಹವಾಗಿ, ಸರ್ವ ಸಮಸ್ಯೆ ನಿವಾರಣೆಯಾಗಿ, ಸರ್ವ ದೋಷ ನಿವಾರಣೆಯಾಗಿ, ಉತ್ತರೋತ್ತರ ಅಭಿವೃದ್ಧಿ ಹೊಂದುತ್ತಾರೆ..!!
ಶ್ರೀ ರಾಮನ ದೇವಾಲಯದಲ್ಲಿ ಆಂಜನೇಯ ದೇವರ ಹೆಸರಿನಲ್ಲೂ , ಆಂಜನೇಯ ದೇವಾಲಯದಲ್ಲಿ ರಾಮದೇವರ ಹೆಸರಿನಲ್ಲೂ ಅರ್ಚನೆ ಮಾಡಿಸಿದರೆ ಸಂಕಲ್ಪಿತ ಕೆಲಸಗಳು ಬೇಗ ಪೂರ್ಣಗೊಳ್ಳುತ್ತವೆ..!!
ಗಂಡ ಸರಿ ಇಲ್ಲ, ಗಂಡನ ಮನೆಯವರು ಸರಿ ಇಲ್ಲ, ವರದಕ್ಷಿಣೆ ಕಾಟ ಇರುವವರು ಶ್ರೀರಾಮ ದೇವರನ್ನು ಪೂಜಿಸಿ ಶ್ರೀರಾಮತಾರಕ ಮಂತ್ರ ಜಪಿಸಿದರೆ ಸರ್ವ ಸಮಸ್ಯೆಯಿಂದ ವಿಮುಕ್ತಿ ಹೊಂದುವಿರಿ..!!!!!!!!
***************************************************"
*ಶ್ರೀ ರಾಮ ರಕ್ಷಾ ಸ್ತೋತ್ರಮ್*
ಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಮ್
ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್
ಧ್ಯಾತ್ವಾ ನೀಲೋತ್ಪಲ ಶ್ಯಾಮಂ ರಾಮಂ ರಾಜೀವಲೋಚನಮ್
ಜಾನಕೀ ಲಕ್ಷ್ಮಣೋಪೇತಂ ಜಟಾಮುಕುಟ ಮಂಡಿತಮ್
ಸಾಸಿತೂಣ ಧನುರ್ಬಾಣ ಪಾಣಿಂ ನಕ್ತಂ ಚರಾಂತಕಮ್
ಸ್ವಲೀಲಯಾ ಜಗತ್ರಾತು ಮಾವಿರ್ಭೂತಮಜಂ ವಿಭುಮ್
ರಾಮರಕ್ಷಾಂ ಪಠೇತ್ಪ್ರಾಜ್ಞಃ ಪಾಪಘ್ನೀಂ ಸರ್ವಕಾಮದಾಮ್
ಶಿರೋ ಮೇ ರಾಘವಃ ಪಾತುಫಾಲಂ ದಶರಥಾತ್ಮಜಃ
ಕೌಸಲ್ಯೇಯೋ ದೃಶೌಪಾತು ವಿಶ್ವಾಮಿತ್ರ ಪ್ರಿಯಃ ಶೃತೀ
ಘ್ರಾಣಂ ಪಾತು ಮಖತ್ರಾತಾ ಮುಖಂ ಸೌಮಿತ್ರಿವತ್ಸಲಃ
ಜಿಹ್ವಾಂ ವಿದ್ಯಾನಿಧಿಃ ಪಾತು ಕಂಠಂ ಭರತ ವಂದಿತಃ
ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕಃ
ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್
ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ
ಸುಗ್ರೀವೇಶಃ ಕಟೀಪಾತು ಸಕ್ಥಿನೀ ಹನುಮತ್-ಪ್ರಭುಃ
ಊರೂ ರಘೂತ್ತಮಃ ಪಾತು ರಕ್ಷಕುಲ ವಿನಾಶಕೃತ್
ಜಾನುನೀ ಸೇತುಕೃತ್ ಪಾತು ಜಂಘೇ ದಶಮುಖಾಂತಕಃ
ಪಾದೌವಿಭೀಷಣ ಶ್ರೀದಃಪಾತು ರಾಮೋಽಖಿಲಂ ವಪುಃ
ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್
ಸಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್
ಪಾತಾಳ ಭೂತಲ ವ್ಯೋಮ ಚಾರಿಣಶ್ಛದ್ಮ ಚಾರಿಣಃ
ನ ದ್ರಷ್ಟುಮಪಿ ಶಕ್ತಾಸ್ತೇ ರಕ್ಷಿತಂ ರಾಮನಾಮಭಿಃ
ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾಸ್ಮರನ್
ನರೋ ನಲಿಪ್ಯತೇ ಪಾಪೈರ್ಭುಕ್ತಿಂ ಮುಕ್ತಿಂ ಚ ವಿಂದತಿ
ಜಗಜ್ಜೈತ್ರೈಕ ಮಂತ್ರೇಣ ರಾಮನಾಮ್ನಾಭಿ ರಕ್ಷಿತಮ್
ಯಃ ಕಂಠೇ ಧಾರಯೇತ್ತಸ್ಯ ಕರಸ್ಥಾಃ ಸರ್ವ ಸಿದ್ಧಯಃ
ವಜ್ರಪಂಜರ ನಾಮೇದಂ ಯೋ ರಾಮಕವಚಂ ಸ್ಮರೇತ್
ಅವ್ಯಾಹತಾಜ್ಞಃ ಸರ್ವತ್ರ ಲಭತೇ ಜಯ ಮಂಗಳಮ್
ಆದಿಷ್ಟವಾನ್ ಯಥಾಸ್ವಪ್ನೇ ರಾಮ ರಕ್ಷಾ ಮಿಮಾಂ ಹರಃ
ತಥಾ ಲಿಖಿತವಾನ್ ಪ್ರಾತಃ ಪ್ರಬುದ್ಧೌ ಬುಧಕೌಶಿಕಃ
ಆರಾಮಃ ಕಲ್ಪವೃಕ್ಷಾಣಾಂ ವಿರಾಮಃ ಸಕಲಾಪದಾಮ್
ಅಭಿರಾಮ ಸ್ತ್ರಿಲೋಕಾನಾಂ ರಾಮಃ ಶ್ರೀಮಾನ್ಸನಃ ಪ್ರಭುಃ
ತರುಣೌ ರೂಪಸಂಪನ್ನೌ ಸುಕುಮಾರೌ ಮಹಾಬಲೌ
ಪುಂಡರೀಕ ವಿಶಾಲಾಕ್ಷೌ ಚೀರಕೃಷ್ಣಾ ಜಿನಾಂಬರೌ
ಫಲಮೂಲಾಸಿನೌ ದಾಂತೌ ತಾಪಸೌ ಬ್ರಹ್ಮಚಾರಿಣೌ
ಪುತ್ರೌ ದಶರಥಸ್ಯೈತೌ ಭ್ರಾತರೌ ರಾಮಲಕ್ಷ್ಮಣೌ
ಶರಣ್ಯೌ ಸರ್ವಸತ್ವಾನಾಂ ಶ್ರೇಷ್ಟಾ ಸರ್ವ ಧನುಷ್ಮತಾಂ
ರಕ್ಷಃಕುಲ ನಿಹಂತಾರೌ ತ್ರಾಯೇತಾಂ ನೋ ರಘೂತ್ತಮೌ
ಆತ್ತ ಸಜ್ಯ ಧನುಷಾ ವಿಷುಸ್ಪೃಶಾ ವಕ್ಷಯಾಶುಗ ನಿಷಂಗ ಸಂಗಿನೌ
ರಕ್ಷಣಾಯ ಮಮ ರಾಮಲಕ್ಷಣಾವಗ್ರತಃ ಪಥಿಸದೈವ ಗಚ್ಛತಾಂ
ಸನ್ನದ್ಧಃ ಕವಚೀ ಖಡ್ಗೀ ಚಾಪಬಾಣಧರೋ ಯುವಾ
ಗಚ್ಛನ್ ಮನೋರಥಾನ್ನಶ್ಚ ರಾಮಃ ಪಾತು ಸ ಲಕ್ಷ್ಮಣಃ
ರಾಮೋ ದಾಶರಥಿ ಶ್ಶೂರೋ ಲಕ್ಷ್ಮಣಾನುಚರೋ ಬಲೀ
ಕಾಕುತ್ಸಃ ಪುರುಷಃ ಪೂರ್ಣಃ ಕೌಸಲ್ಯೇಯೋ ರಘೂತ್ತಮಃ
ವೇದಾಂತ ವೇದ್ಯೋ ಯಜ್ಞೇಶಃ ಪುರಾಣ ಪುರುಷೋತ್ತಮಃ
ಜಾನಕೀವಲ್ಲಭಃ ಶ್ರೀಮಾನಪ್ರಮೇಯ ಪರಾಕ್ರಮಃ
ಇತ್ಯೇತಾನಿ ಜಪೇನ್ನಿತ್ಯಂ ಮದ್ಭಕ್ತಃ ಶ್ರದ್ಧಯಾನ್ವಿತಃ
ಅಶ್ವಮೇಥಾಧಿಕಂ ಪುಣ್ಯಂ ಸಂಪ್ರಾಪ್ನೋತಿ ನಸಂಶಯಃ
ರಾಮಂ ದೂರ್ವಾದಳ ಶ್ಯಾಮಂ ಪದ್ಮಾಕ್ಷಂ ಪೀತಾವಾಸಸಂ
ಸ್ತುವಂತಿ ನಾಭಿರ್-ದಿವ್ಯೈರ್-ನತೇ ಸಂಸಾರಿಣೋ ನರಾಃ
ರಾಮಂ ಲಕ್ಷ್ಮಣ ಪೂರ್ವಜಂ ರಘುವರಂ ಸೀತಾಪತಿಂ ಸುಂದರಂ
ಕಾಕುತ್ಸಂ ಕರುಣಾರ್ಣವಂ ಗುಣನಿಧಿಂ ವಿಪ್ರಪ್ರಿಯಂ ಧಾರ್ಮಿಕಂ
ರಾಜೇಂದ್ರಂ ಸತ್ಯಸಂಧಂ ದಶರಥತನಯಂ ಶ್ಯಾಮಲಂ ಶಾಂತಮೂರ್ತಿಂ
ವಂದೇಲೋಕಾಭಿರಾಮಂ ರಘುಕುಲ ತಿಲಕಂ ರಾಘವಂ ರಾವಣಾರಿಮ್
ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಥಸೇ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ
ಶ್ರೀರಾಮ ರಾಮ ರಘುನಂದನ ರಾಮ ರಾಮ
ಶ್ರೀರಾಮ ರಾಮ ಭರತಾಗ್ರಜ ರಾಮ ರಾಮ
ಶ್ರೀರಾಮ ರಾಮ ರಣಕರ್ಕಶ ರಾಮ ರಾಮ
ಶ್ರೀರಾಮ ರಾಮ ಶರಣಂ ಭವ ರಾಮ ರಾಮ
ಶ್ರೀರಾಮ ಚಂದ್ರ ಚರಣೌ ಮನಸಾ ಸ್ಮರಾಮಿ
ಶ್ರೀರಾಮ ಚಂದ್ರ ಚರಣೌ ವಚಸಾ ಗೃಹ್ಣಾಮಿ
ಶ್ರೀರಾಮ ಚಂದ್ರ ಚರಣೌ ಶಿರಸಾ ನಮಾಮಿ
ಶ್ರೀರಾಮ ಚಂದ್ರ ಚರಣೌ ಶರಣಂ ಪ್ರಪದ್ಯೇ
ಮಾತಾರಾಮೋ ಮತ್-ಪಿತಾ ರಾಮಚಂದ್ರಃ
ಸ್ವಾಮೀ ರಾಮೋ ಮತ್-ಸಖಾ ರಾಮಚಂದ್ರಃ
ಸರ್ವಸ್ವಂ ಮೇ ರಾಮಚಂದ್ರೋ ದಯಾಳುಃ
ನಾನ್ಯಂ ಜಾನೇ ನೈವ ನ ಜಾನೇ
ದಕ್ಷಿಣೇಲಕ್ಷ್ಮಣೋ ಯಸ್ಯ ವಾಮೇ ಚ ಜನಕಾತ್ಮಜಾ
ಪುರತೋಮಾರುತಿರ್-ಯಸ್ಯ ತಂ ವಂದೇ ರಘುವಂದನಮ್
ಲೋಕಾಭಿರಾಮಂ ರಣರಂಗಧೀರಂ
ರಾಜೀವನೇತ್ರಂ ರಘುವಂಶನಾಥಂ
ಕಾರುಣ್ಯರೂಪಂ ಕರುಣಾಕರಂ ತಂ
ಶ್ರೀರಾಮಚಂದ್ರಂ ಶರಣ್ಯಂ ಪ್ರಪದ್ಯೇ
ಮನೋಜವಂ ಮಾರುತ ತುಲ್ಯ ವೇಗಂ
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಟಂ
ವಾತಾತ್ಮಜಂ ವಾನರಯೂಧ ಮುಖ್ಯಂ
ಶ್ರೀರಾಮದೂತಂ ಶರಣಂ ಪ್ರಪದ್ಯೇ
ಕೂಜಂತಂ ರಾಮರಾಮೇತಿ ಮಧುರಂ ಮಧುರಾಕ್ಷರಂ
ಆರುಹ್ಯಕವಿತಾ ಶಾಖಾಂ ವಂದೇ ವಾಲ್ಮೀಕಿ ಕೋಕಿಲಮ್
ಆಪದಾಮಪಹರ್ತಾರಂ ದಾತಾರಂ ಸರ್ವಸಂಪದಾಂ
ಲೋಕಾಭಿರಾಮಂ ಶ್ರೀರಾಮಂ ಭೂಯೋಭೂಯೋ ನಮಾಮ್ಯಹಂ
ಭರ್ಜನಂ ಭವಬೀಜಾನಾಮರ್ಜನಂ ಸುಖಸಂಪದಾಂ
ತರ್ಜನಂ ಯಮದೂತಾನಾಂ ರಾಮ ರಾಮೇತಿ ಗರ್ಜನಮ್
ರಾಮೋ ರಾಜಮಣಿಃ ಸದಾ ವಿಜಯತೇ ರಾಮಂ ರಮೇಶಂ ಭಜೇ
ರಾಮೇಣಾಭಿಹತಾ ನಿಶಾಚರಚಮೂ ರಾಮಾಯ ತಸ್ಮೈ ನಮಃ
ರಾಮಾನ್ನಾಸ್ತಿ ಪರಾಯಣಂ ಪರತರಂ ರಾಮಸ್ಯ ದಾಸೋಸ್ಮ್ಯಹಂ
ರಾಮೇ ಚಿತ್ತಲಯಃ ಸದಾ ಭವತು ಮೇ ಭೋ ರಾಮ ಮಾಮುದ್ಧರ
ಶ್ರೀರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತತ್ತುಲ್ಯಂ ರಾಮ ನಾಮ ವರಾನನೇ
ಇತಿ ಶ್ರೀಬುಧಕೌಶಿಕಮುನಿ ವಿರಚಿತಂ ಶ್ರೀರಾಮ ರಕ್ಷಾಸ್ತೋತ್ರಂ ಸಂಪೂರ್ಣಂ
ಶ್ರೀರಾಮ ಜಯರಾಮ ಜಯಜಯರಾಮ
No comments:
Post a Comment