*ಉಚ್ಚಿಷ್ಟಮ್ ಎಂದರೆ ಎಂಜಲು .*
*ಯಾವ ಐದು ವಸ್ತುಗಳು ಎಂಜಲು*
ಇದೊಂದು ಸುಭಾಷಿತಕಾರು ಬರೆದ ಒಂದು ಸುಭಾಷಿತ
ಆದರೆ ಸತ್ಯ .... ಯಾವ ಐದು ವಸ್ತುಗಳು ಅಪವಿತ್ರ ಆದರೂ ಪವಿತ್ರ . ಇಲ್ಲಿ ಯಾವುದೂ ಅಪವಿತ್ರವಲ್ಲ ಅನ್ನುವದೆ ಅವರ ಉದ್ದೇಶ ಓದಿ
*ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ*
ಅಂದರೆ .. *ಎಂಜಲು, ಶಿವನ ನಿರ್ಮಾಲ್ಯ, ವಾಂತಿ, ಹೆಣದ ಬಟ್ಟೆ, ಕಾಗೆಯ ಮಲದಿಂದ ಹುಟ್ಟಿದ್ದು* . ಈ ಐದು ಅತ್ಯಂತ ಪವಿತ್ರವಾದವುಗಳು...!! ಎಂದು .
1. *ಉಚ್ಚಿಷ್ಟಮ್* - ಎಂದರೆ *ಎಂಜಲು* .
*ಹಾಲು ಕರುವಿನ ಎಂಜಲು. ಹಸುವಿನ ಹಾಲನ್ನು ಕರು ಕುಡಿದು ಹಾಗೇ ಬಿಟ್ಟಿರುತ್ತದೆ . ಆ ಎಂಜಲು ಹಾಲನ್ನೇ ನಾವು ಉಪಯೋಗಿಸುತ್ತೇವೆ. ಕರುವಿನಿಂದ ಎಂಜಲಾದ ಹಾಲು ದೇವರಿಗೆ , ಪಂಚಾಮೃತಾಭಿಷೇಕಕ್ಕೆ ಬೇಕಾದ ಅತ್ಯಂತ ಪವಿತ್ರ ವಸ್ತು.*
2. *ಶಿವನಿರ್ಮಾಲ್ಯಮ್* - ಎಂದರೆ *ಶಿವನ ಜಟೆಯಿಂದ ಹೊರಗೆ ಬಂದ ಗಂಗೆ.*
*ಗಂಗಾ ನದಿ ಸ್ವರ್ಗಲೋಕದಿಂದ ಭೂಲೋಕಕ್ಕೆ ಬರುವಾಗ ಅಹಂಕಾರದಿಂದ ಬರುತ್ತಿದ್ದಳು . ಆಗ ಗಂಗೆಯ ಗರ್ವವನ್ನು ದಮನ ಮಾಡುವುದಕ್ಕಾಗಿ ಪರಶಿವನು ಆ ಗಂಗೆಯನ್ನು ತನ್ನ ಜಟೆಯ ಮಧ್ಯೆ ಕಟ್ಟಿಹಾಕಿಬಿಟ್ಟ. ಅನಂತರ ಆ ಜಟೆಯಿ೦ದ ಗಂಗಾನದಿಯನ್ನು ಹೊರಕೆ ಹಾಕಿದ. ಶಿವನ ಜಟೆಯಲ್ಲಿದ್ದು ಅಲ್ಲಿಂದ ಮುಕ್ತಳಾದ್ದರಿಂದ ಗಂಗಾನದಿಯು ಶಿವನ ನಿರ್ಮಾಲ್ಯವಾಯಿತು. ಆದರೂ ಈ ಗಂಗೆಯು ಪವಿತ್ರ.*
3. *ವಮನಮ್* - ಎಂದರೆ *ವಾಂತಿ (ಜೇನುತುಪ್ಪ).*
*ಜೇನುಹುಳುಗಳು ಬೇರೆಬೇರೆಯ ಗಿಡಮರಗಳಿಂದ ಮಕರಂದವನ್ನು ಬಾಯಲ್ಲಿ ಹಿಡಿದು ತಂದು, ಬಾಯಿಂದಲೇ ಆ ಮಕರಂದವನ್ನು ಗೂಡಿನಲ್ಲಿ ಇಟ್ಟಿರುತ್ತವೆ. ಅದೇ ಜೇನು ತುಪ್ಪ. ಇದು ಜೇನುಹುಳುಗಳ ವಮನ. ಆದರೆ ಜೇನು ತುಪ್ಪ ಪ್ರಶಸ್ತವಾದದ್ದು.*
4. *ಶವಕರ್ಪಟಮ್* - ಎಂದರೆ *ಶವದ ಬಟ್ಟೆ (ರೇಷ್ಮೆ ವಸ್ತ್ರ).*
*ರೇಷ್ಮೆ ಹುಳುಗಳನ್ನು ಬೇಯಿಸಿ, ಸಾಯಿಸಿ ಅದರ ನೂಲಿನಿಂದ ಸಿದ್ದವಾದ ವಸ್ತು.*
5. *ಕಾಕವಿಷ್ಠಾಸಮುತ್ಪನ್ನಮ್* - ಅಂದರೆ *ಕಾಗೆಯ ಮಲದಿಂದ ಹುಟ್ಟಿದ್ದು (ಅರಳಿ ಮರ).*
*ಕಾಗೆಯು ಅರಳಿಮರದ ಬೀಜವನ್ನು ತಿಂದಾಗ, ಅದು ಕಾಗೆಯ ಮಲದ ಮೂಲಕ ಹೊರಗಡೆಗೆ ಎಲ್ಲೋ .. ಬಿದ್ದಾಗ ಅದರಿಂದ ಅರಳಿ ಮರವು ಹುಟ್ಟುತ್ತದೆ. ಅಶ್ವತ್ಥವೃಕ್ಷವು ತ್ರಿಮೂರ್ತಿಸ್ವರೂಪದ್ದಾಗಿರುತ್ತದೆ.*
ಇದೊಂದು ಚಮತ್ಕಾರಿಕ ಸುಭಾಷಿತ. ಮಡಿ, ಮೈಲಿಗೆ ಎಂದು ಬಹಳ ಹಾರಾಡುವವರಿಗೆ, ಕವಿಯು ಎಲ್ಲವೂ ನೈರ್ಮಾಲ್ಯವೇ ಎಂದು ಚಾಟಿ ಬೀಸಿದ್ದಾನೆ.
ಲೋಕದಲ್ಲಿ ಅಪವಿತ್ರವೆಂಬುದು, ಅಶುದ್ಧವೆಂಬುದು ನಮ್ಮ *"ಮನಸ್ಸು"* ಮಾತ್ರ. *"ಮನಸ್ಸ"* ನ್ನು ಶುದ್ಧವಾಗಿಸಿದಲ್ಲಿ ಸಕಲವೂ ಪವಿತ್ರವಾಗಿಯೇ ಇರುವುದು.
ಆಹಾರಕ್ಕೆ ಭಕ್ತಿಯನ್ನು ಸೇರಿಸಿದರೆ *ನೈವೇಧ್ಯ* ವಾಗುವುದು.
ನಿರಾಹಾರಕ್ಕೆ ಭಕ್ತಿಯನ್ನು ಸೇರಿಸಿದರೆ *ಉಪವಾಸ* ವಾಗುವುದು...
ನೀರಿಗೆ ಭಕ್ತಿಯನ್ನು ಸೇರಿಸಿದರೆ *ತೀರ್ಥ* ವಾಗುವುದು...
ಮಾತಿಗೆ ಭಕ್ತಿಯನ್ನು ಸೇರಿಸಿದರೆ *ಸ್ತೋತ್ರ* ವಾಗುವುದು...
ಕೇಳುವುದಕ್ಕೆ ಭಕ್ತಿಯನ್ನು ಸೇರಿಸಿದರೆ *ಮಂತ್ರ* ವಾಗುವುದು..
ಆಲೋಚನೆಗೆ ಭಕ್ತಿಯನ್ನು ಸೇರಿಸಿದರೆ *ಧ್ಯಾನ* ವಾಗುವುದು..
ಕೆಲಸಗಳಿಗೆ ಭಕ್ತಿಯನ್ನು ಸೇರಿಸಿದರೆ *ಪೂಜೆ* ಯಾಗುವುದು.
ಪ್ರೀತಿಗೆ ಭಕ್ತಿಯನ್ನು ಸೇರಿಸಿದರೆ *ಆರಾಧನೆ* ಯಾಗುವುದು..
ಸ್ನೇಹಕ್ಕೆ ಭಕ್ತಿಯನ್ನು ಸೇರಿಸಿದರೆ *ಸತ್ಸಂಗ* ವಾಗುವುದು...
ಬದುಕಿಗೇ.. ಭಕ್ತಿಯನ್ನು ಸೇರಿಸಿದರೆ ಬದುಕೇ *ಪಾವನ* ವಾಗುವದು....
No comments:
Post a Comment